ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಮೊದಲನೇ ಪ್ರಾಶಸ್ತ್ರದಲ್ಲೇ ಜಯಭೇರಿ ಗಳಿಸಿದ್ದಾರೆ.

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಂಡಂತಿರುವ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಒಳಗೊಂಡಿರುವಂತೆ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಶಿವಮೊಗ್ಗ ವಿನೋಭನಗರದ ಡಾ.ಧನಂಜಯ ಸರ್ಜಿಯವರು 19,973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 31199 ಮತಗಳಿಸಿದ ಡಾ. ಧನಂಜಯ ಸರ್ಜಿಯವರು 19973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು 11226 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. .

Leave a Comment

error: Content is protected !!