ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ವತಿಯಿಂದ ಗಿಡ ನಾಟಿ ಕಾರ್ಯಕ್ರಮ ಜೂ.7ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸೌತಡ್ಕ ದೇವಳದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ನಿಕಟಪೂರ್ವ ಸದಸ್ಯ ಪ್ರಶಾಂತ್ ಪೂವಾಜೆ, ದೇವಳದ ಆಡಳಿತಾಧಿಕಾರಿ ಶ್ರೀನಿವಾಸ್ ಕೆ ವಿ, ಮ್ಯಾನೇಜರ್ ರಾಮಕೃಷ್ಣ ಭಟ್, ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದುರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ರೋಹಿಣಿ, ಕುಸುಮ, ಒಕ್ಕೂಟದ ಪದಾಧಿಕಾರಿಗಳಾದ ಅಶ್ವಿನಿ ಓನಿತ್ತಾರ್, ಅರುಣ ಪೂವಾಜೆ ಉಪಸ್ಥಿತರಿದ್ದರು.

Leave a Comment

error: Content is protected !!