26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಬಹಳಷ್ಟು ಉನ್ನತ ಹುದ್ದೆಯಲ್ಲಿ ಮುಂದುವರಿದಿರುವರು. ಶಿಕ್ಷಣದ ಜೊತೆಗೆ ಸಂಸ್ಕಾರದ ಜೀವನ ಮೌಲ್ಯಗಳನ್ನು ಕಲಿಸುತ್ತಿರುವ ಈ ಸಂಸ್ಥೆಯ ಮುಖಾಂತರ ನಿಮ್ಮೆಲ್ಲಾ ಆಶೋತ್ತರಗಳು ಈಡೇರಲಿ ಎಂದು ನಿನಾದದ ಸೋನಿಯಾವರ್ಮಾ ಅವರು ಹಾರೈಸಿದರು.

ಅವರು ಉಜಿರೆ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಎಲ್ಲರೊಂದಿಗೆ ಮುನ್ನಡೆಯಲು ಶ್ರದ್ಧೆಯಿಂದ ಕೂಡಿದ ಕಲಿಕೆ ಅನಿವಾರ್ಯ, ಮನಸ್ಸನ್ನು ಏಕಾಗ್ರತೆಯಿಂದಿರಿಸಿ, ನಿತ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಭವಿಷ್ಯದ ಉತ್ತಮಿಕೆ ಸಾಧ್ಯವೆಂದು ಸಂಸ್ಥೆಯ ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ನಿರ್ವಹಣಾಧಿಕಾರಿ ಪೂರನ್ ವರ್ಮಾ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಕಾಲೇಜಿನ ಕುರಿತಾದ ಹೆಚ್ಚಿನ ವಿವರಗಳನ್ನು ವಿದ್ಯಾರ್ಥಿಗಳ ಮನಮುಟ್ಟಿಸಿದರು.
ವಸತಿ ನಿಲಯಗಳ ನಿಯಮಾವಳಿಗಳನ್ನು ಗಣಕಶಾಸ್ತ್ರದ ಉಪನ್ಯಾಸಕ ಪವಿತ್ರಕುಮಾರ್ ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಕುರಿತು ಗಣಿತಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ಧನಲಕ್ಷ್ಮಿ ವಿವರಿಸಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್, ದೈಹಿಕ ಮಾರ್ಗದರ್ಶಕರಾದ ಲಕ್ಷ್ಮಣ್ ಜಿ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತಶಾಸ್ತ್ರದ ಉಪನ್ಯಾಸಕಿ ಪ್ರಿಯ ಎಂ. ಹೆಚ್. ವಂದಿಸಿ ,ನಿರೂಪಿಸಿದರು.

Related posts

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya
error: Content is protected !!