25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಬಹಳಷ್ಟು ಉನ್ನತ ಹುದ್ದೆಯಲ್ಲಿ ಮುಂದುವರಿದಿರುವರು. ಶಿಕ್ಷಣದ ಜೊತೆಗೆ ಸಂಸ್ಕಾರದ ಜೀವನ ಮೌಲ್ಯಗಳನ್ನು ಕಲಿಸುತ್ತಿರುವ ಈ ಸಂಸ್ಥೆಯ ಮುಖಾಂತರ ನಿಮ್ಮೆಲ್ಲಾ ಆಶೋತ್ತರಗಳು ಈಡೇರಲಿ ಎಂದು ನಿನಾದದ ಸೋನಿಯಾವರ್ಮಾ ಅವರು ಹಾರೈಸಿದರು.

ಅವರು ಉಜಿರೆ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಎಲ್ಲರೊಂದಿಗೆ ಮುನ್ನಡೆಯಲು ಶ್ರದ್ಧೆಯಿಂದ ಕೂಡಿದ ಕಲಿಕೆ ಅನಿವಾರ್ಯ, ಮನಸ್ಸನ್ನು ಏಕಾಗ್ರತೆಯಿಂದಿರಿಸಿ, ನಿತ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಭವಿಷ್ಯದ ಉತ್ತಮಿಕೆ ಸಾಧ್ಯವೆಂದು ಸಂಸ್ಥೆಯ ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ನಿರ್ವಹಣಾಧಿಕಾರಿ ಪೂರನ್ ವರ್ಮಾ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಕಾಲೇಜಿನ ಕುರಿತಾದ ಹೆಚ್ಚಿನ ವಿವರಗಳನ್ನು ವಿದ್ಯಾರ್ಥಿಗಳ ಮನಮುಟ್ಟಿಸಿದರು.
ವಸತಿ ನಿಲಯಗಳ ನಿಯಮಾವಳಿಗಳನ್ನು ಗಣಕಶಾಸ್ತ್ರದ ಉಪನ್ಯಾಸಕ ಪವಿತ್ರಕುಮಾರ್ ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಕುರಿತು ಗಣಿತಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ಧನಲಕ್ಷ್ಮಿ ವಿವರಿಸಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್, ದೈಹಿಕ ಮಾರ್ಗದರ್ಶಕರಾದ ಲಕ್ಷ್ಮಣ್ ಜಿ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತಶಾಸ್ತ್ರದ ಉಪನ್ಯಾಸಕಿ ಪ್ರಿಯ ಎಂ. ಹೆಚ್. ವಂದಿಸಿ ,ನಿರೂಪಿಸಿದರು.

Related posts

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!