24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಯಶ್ವಿತ್ ಶೆಟ್ಟಿ 8ನೇ ತರಗತಿ, ಉಪಮುಖ್ಯ ಮಂತ್ರಿಯಾಗಿ ಅಶ್ವಿತ್ 7ನೇ ತರಗತಿ ಬಹುಮತಗಳನ್ನು ಪಡೆದು ಆಯ್ಕೆಯಾದರು ಹಾಗೂ ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ 8ನೇ ತರಗತಿ ಇವರನ್ನು ನೇಮಕ ಮಾಡಲಾಯಿತು.

ಉಳಿದಂತೆ ಮಂತ್ರಿಮಂಡಲಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ ಹಾಗೂ ವೀಣಾ ಕೆ ಎಸ್ ಮತ್ತು ದೈಹಿಕ ಶಿಕ್ಷಕರಾದ ನಿರಂಜನ್ ಇವರ ಮುಂದಾಳತ್ವದಲ್ಲಿ ಮತದಾನ ಯಶಸ್ವಿಯಾಯಿತು. ಗೆಲುವಿನ ವಿಜಯೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿಗಳಾದರು. ಸಹ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!