30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya
error: Content is protected !!