April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!