July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!