September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya
error: Content is protected !!