22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಪೋಷಿಸಬೇಕು. ನೀರನ್ನು ಹಿತಮಿತವಾಗಿ ಬಳಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರೊಂದಿಗೆ ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸಬೇಕು. ಪ್ರಾಣಿ ಸಂಕುಲವನ್ನು ಕಾಪಾಡಬೇಕು ಎಂದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮಾನ್ ನಾರಾಯಣಗೌಡ ಕೊಳಂಬೆ ಇವರು ವಿದ್ಯಾರ್ಥಿಗಳಿಗೆ ಗಿಡವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್, ಸಹ ಕಾರ್ಯಕ್ರಮಾಧಿಕಾರಿ ಶ್ರೀ ಸಂದೀಪ್ ಐ ಉಪಸ್ಥಿತರಿದ್ದರು. ಸ್ವಯಂಸೇವಕ ಧನುಷ್ ಕೆ ಎನ್ ಕಾರ್ಯಕ್ರಮದ ನಿರೂಪಣೆ ಮಾಡಿ, ಸ್ವಾಗತಿಸಿದರು. ಲತೇಶ್ ಧನ್ಯವಾದವಿತ್ತರು.

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya
error: Content is protected !!