ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಬಹಳಷ್ಟು ಉನ್ನತ ಹುದ್ದೆಯಲ್ಲಿ ಮುಂದುವರಿದಿರುವರು. ಶಿಕ್ಷಣದ ಜೊತೆಗೆ ಸಂಸ್ಕಾರದ ಜೀವನ ಮೌಲ್ಯಗಳನ್ನು ಕಲಿಸುತ್ತಿರುವ ಈ ಸಂಸ್ಥೆಯ ಮುಖಾಂತರ ನಿಮ್ಮೆಲ್ಲಾ ಆಶೋತ್ತರಗಳು ಈಡೇರಲಿ ಎಂದು ನಿನಾದದ ಸೋನಿಯಾವರ್ಮಾ ಅವರು ಹಾರೈಸಿದರು.

ಅವರು ಉಜಿರೆ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಎಲ್ಲರೊಂದಿಗೆ ಮುನ್ನಡೆಯಲು ಶ್ರದ್ಧೆಯಿಂದ ಕೂಡಿದ ಕಲಿಕೆ ಅನಿವಾರ್ಯ, ಮನಸ್ಸನ್ನು ಏಕಾಗ್ರತೆಯಿಂದಿರಿಸಿ, ನಿತ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಭವಿಷ್ಯದ ಉತ್ತಮಿಕೆ ಸಾಧ್ಯವೆಂದು ಸಂಸ್ಥೆಯ ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ನಿರ್ವಹಣಾಧಿಕಾರಿ ಪೂರನ್ ವರ್ಮಾ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಕಾಲೇಜಿನ ಕುರಿತಾದ ಹೆಚ್ಚಿನ ವಿವರಗಳನ್ನು ವಿದ್ಯಾರ್ಥಿಗಳ ಮನಮುಟ್ಟಿಸಿದರು.
ವಸತಿ ನಿಲಯಗಳ ನಿಯಮಾವಳಿಗಳನ್ನು ಗಣಕಶಾಸ್ತ್ರದ ಉಪನ್ಯಾಸಕ ಪವಿತ್ರಕುಮಾರ್ ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಕುರಿತು ಗಣಿತಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ಧನಲಕ್ಷ್ಮಿ ವಿವರಿಸಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್, ದೈಹಿಕ ಮಾರ್ಗದರ್ಶಕರಾದ ಲಕ್ಷ್ಮಣ್ ಜಿ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತಶಾಸ್ತ್ರದ ಉಪನ್ಯಾಸಕಿ ಪ್ರಿಯ ಎಂ. ಹೆಚ್. ವಂದಿಸಿ ,ನಿರೂಪಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!