25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ದೊರೆಯುವುದು, ಈ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಬಹಳಷ್ಟು ಉನ್ನತ ಹುದ್ದೆಯಲ್ಲಿ ಮುಂದುವರಿದಿರುವರು. ಶಿಕ್ಷಣದ ಜೊತೆಗೆ ಸಂಸ್ಕಾರದ ಜೀವನ ಮೌಲ್ಯಗಳನ್ನು ಕಲಿಸುತ್ತಿರುವ ಈ ಸಂಸ್ಥೆಯ ಮುಖಾಂತರ ನಿಮ್ಮೆಲ್ಲಾ ಆಶೋತ್ತರಗಳು ಈಡೇರಲಿ ಎಂದು ನಿನಾದದ ಸೋನಿಯಾವರ್ಮಾ ಅವರು ಹಾರೈಸಿದರು.

ಅವರು ಉಜಿರೆ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಎಲ್ಲರೊಂದಿಗೆ ಮುನ್ನಡೆಯಲು ಶ್ರದ್ಧೆಯಿಂದ ಕೂಡಿದ ಕಲಿಕೆ ಅನಿವಾರ್ಯ, ಮನಸ್ಸನ್ನು ಏಕಾಗ್ರತೆಯಿಂದಿರಿಸಿ, ನಿತ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಭವಿಷ್ಯದ ಉತ್ತಮಿಕೆ ಸಾಧ್ಯವೆಂದು ಸಂಸ್ಥೆಯ ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ನಿರ್ವಹಣಾಧಿಕಾರಿ ಪೂರನ್ ವರ್ಮಾ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಕಾಲೇಜಿನ ಕುರಿತಾದ ಹೆಚ್ಚಿನ ವಿವರಗಳನ್ನು ವಿದ್ಯಾರ್ಥಿಗಳ ಮನಮುಟ್ಟಿಸಿದರು.
ವಸತಿ ನಿಲಯಗಳ ನಿಯಮಾವಳಿಗಳನ್ನು ಗಣಕಶಾಸ್ತ್ರದ ಉಪನ್ಯಾಸಕ ಪವಿತ್ರಕುಮಾರ್ ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆ ಕುರಿತು ಗಣಿತಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ಧನಲಕ್ಷ್ಮಿ ವಿವರಿಸಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್, ದೈಹಿಕ ಮಾರ್ಗದರ್ಶಕರಾದ ಲಕ್ಷ್ಮಣ್ ಜಿ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತಶಾಸ್ತ್ರದ ಉಪನ್ಯಾಸಕಿ ಪ್ರಿಯ ಎಂ. ಹೆಚ್. ವಂದಿಸಿ ,ನಿರೂಪಿಸಿದರು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!