July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ.

ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿ ದ್ದಾರೆ ಉಜಿರೆ ಗ್ರಾಮದ ಮಾಚಾರು ನಿವಾಸಿ ನಾರಾಯಣ ನಾಯ್ಕ ಮತ್ತು ಸುಶೀಲಾ ದಂಪತಿಯ ಪುತ್ರಿ ದಿಕ್ಷೀತಾರವರು ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಪ್ರೀತಿಯ ಕೂದಲನ್ನು ದಾನವಾಗಿ ನೀಡಿದ್ದಾರೆ.

Related posts

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya
error: Content is protected !!