September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ ಇವರ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.9ರಂದು ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಣ್ಣಿನ ತಪಾಸಣೆಗೆ ಬರುವವರು ಬೆಳಿಗ್ಗೆ 11.30ರೊಳಗೆ ಶಿಬಿರಕ್ಕೆ ಹಾಜರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!