July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಬೆಳ್ತಂಗಡಿ : ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ನಿರ್ಮಿಸಲಾದ ಶೈಖುನಾ ಕಾಡೇರಿ ಉಸ್ಥಾದ್ ಮೆಮೋರಿಯಲ್ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಸಮಾರಂಭವು ಜೂ 5 ರಂದು ದಾರುಸ್ಸಲಾಂ ಕ್ಯಾಂಪಸ್ಸಿನಲ್ಲಿ ನಡೆಯಿತು.


ದಾರುಸ್ಸಲಾಂ ಸಂಸ್ಥೆಯ ಯು ಎ ಇ ನ್ಯಾಷನಲ್‌ ಸಮಿತಿಯ ಸಂಪೂರ್ಣ ಸಹಾಯ ಹಾಗೂ ಸಹಕಾರದ ಫಲವಾಗಿ ದಾರುಸ್ಸಲಾಂ ಕ್ಯಾಂಪಸ್ಸಿನಲ್ಲಿ ಸುಂದರವಾದ ಬಹು ಅವಶ್ಯಕವಾದ ಇಸ್ಲಾಮಿಕ್ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ನ್ನು ನಿರ್ಮಿಸಿ ಉದ್ಘಾಟಿಸಲಾಯಿತು. ಬೆಳ್ತಂಗಡಿ ಜಮಾಅತಿನ ಹಾಗೂ ಇತರ ದಾನಿಗಳಾದ ಹಫೀಯ್ ಬೆಂಗಳೂರು ನೀಡಿದ 1 ಲಕ್ಷ ರೂಪಾಯಿಗಳ ಸಹಕಾರದಿಂದ ಪುಸ್ತಕಗಳನ್ನು ಸಂಗ್ರಹಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಿಲ್ರ್ ಜುಮಾ ಮಸೀದಿಯ ಅಧ್ಯಕ್ಷರಾದ ಬಿ ಎ ನಝೀರ್ರವರು ವಹಿಸಿದ್ದರು. ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ನಿರ್ವಹಿಸಿದರು. ವೈಸ್ ಪ್ರಿನ್ಸಿಪಾಲ್ ಸಯ್ಯಿದ್ ತ್ವಾಹ ಜಿಫ್ರಿ ತಂಙಳ್ ದುಅ ನಿರ್ವಹಿಸಿದರು.


ಸಭೆಯಲ್ಲಿ ಸಯ್ಯಿದ್ ಇಸ್ಮಾಯಿಲ್ ತಂಙಳ್, ಅಬ್ದುಲ್ ರಶೀದ್ ಮಕ್ಕಾ, ಹನೀಫ್ ಫೈಝಿ ಖತೀಬರು ಕೆ ಜೆ ಎಂ ಬೆಳ್ತಂಗಡಿ, ಅಹ್ಮದ್ ಹುಸೈನ್ ಮೂಡಬಿದ್ರೆ ಕಾರ್ಯದರ್ಶಿ ದಾರುಸ್ಸಲಾಂ ಬೆಳ್ತಂಗಡಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ ಕೋಶಾಧಿಕಾರಿ ದಾರುಸ್ಸಲಾಂ ಬೆಳ್ತಂಗಡಿ, ಸದಸ್ಯರಾದ ಅಬ್ದುಲ್ ಹಮೀದ್ ಕಣ್ಣೂರು, ಯು ಕೆ ಮೋನಾಕ ಕಕ್ಕಿಂಜೆ, ಸದರ್ ಉಸ್ತಾದ್ ಅಬೂಬಕ್ಕರ್ ಸಿದ್ದೀಕ್ ಅಯ್ಹುರಿ, ವೈದ್ಯಾಧಿಕಾರಿ ಡಾ.ನವಾಝ್ ಎನ್ ಎಸ್ ಅಬ್ದುಲ್ ರಹ್ಮಾನ್ ಬೆಳ್ತಂಗಡಿ, ಹನೀಫ್ ಶಿರ್ತಾಡಿ, ಸಂಸ್ಥೆಯ ಅಧ್ಯಾಪಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!