September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

ಕೊಕ್ಕಡ: ವಿದ್ಯಾರ್ಥಿ ದೆಸೆಯಲ್ಲಿ ಗಿಡ ಮರಗಳ ಮಹತ್ವವನ್ನು ಅರಿತು, ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಪ್ರಸ್ತುತ ಕಾಲ ಘಟ್ಟದಲ್ಲಿ ಅತಿ ಅವಶ್ಯಕವಾಗಿದ್ದು, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲದೆ ಪ್ರಕೃತಿಯೊಂದಿಗೆ ಬದುಕುವ ನೈಜ ಜೀವನ ಪದ್ಧತಿಯನ್ನು ತಿಳಿ ಹೇಳುವ ಕಾರ್ಯವು ನಡೆಯುತ್ತಿದೆ. ವಿದ್ಯಾರ್ಥಿಗಳ ಮೂಲಕ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಗಿಡವನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಲಾಗುತ್ತಿದೆ. ಶಾಲೆಯಲ್ಲಿ ಈಗಾಗಲೇ ಆಡಳಿತ ಸಮಿತಿ ಹಾಗೂ ಶಿಕ್ಷಕರು ಮಗುವಿಗೊಂದು ಮರ ಎನ್ನುವ ಯೋಜನೆಯನ್ನು ಹಾಕಿಕೊಂಡಿದೆ. ಈ ಯೋಜನೆಯಲ್ಲಿ ಪ್ರತಿ ಮಗುವು ಶಾಲೆಯಲ್ಲೊಂದು ಅಥವಾ ಮನೆಯಲ್ಲೊಂದು ಗಿಡ ನೆಟ್ಟು ಪೋಷಿಸುವ ಕಾರ್ಯ ಮಾಡಲಿದ್ದಾರೆ ಎಂದು ಶ್ರೀ ಕ್ಷೇತ್ರ ಸೌತಡ್ಕದ ನೈಮಿಷ ಹೌಸ್ ಆಫ್ ಸ್ಪೈಸಸ್ ನ ಮಾಲಕ ಬಾಲಕೃಷ್ಣ ನೈಮಿಷ ತಿಳಿಸಿದರು.


ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆವರಣದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.


ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಮಾತನಾಡಿ, ಗಿಡ ನೆಟ್ಟು ಪೋಷಿಸುವ ಕಾರ್ಯ ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗಿರದೆ, ನಿರಂತರ ನಾವು ಪ್ರಕೃತಿಯೊಂದಿಗೆ ಸಂಬಂಧವನ್ನು ಇರಿಸಿಕೊಳ್ಳುವಂತಿರಬೇಕು ಎಂದರು.
ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಾತನಾಡಿ, ಶಾಲೆಯಲ್ಲಿ ಕಳೆದ ವರ್ಷವೂ ಹಲವು ಔಷಧಿಯ ಗಿಡಗಳನ್ನು ನೆಟ್ಟು ಪೋಷಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಮುಂದುವರಿಸಿಕೊಂಡು ಹೋಗಲಿದ್ದೇವೆ ಎಂದರು.
ವಿದ್ಯಾರ್ಥಿಗಳ ಮನೆಯಿಂದ ತಂದಿರುವ ಗಿಡಗಳನ್ನು ಶಾಲಾ ತೋಟದಲ್ಲಿ ನೆಡಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!