24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಪೋಷಿಸಬೇಕು. ನೀರನ್ನು ಹಿತಮಿತವಾಗಿ ಬಳಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರೊಂದಿಗೆ ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸಬೇಕು. ಪ್ರಾಣಿ ಸಂಕುಲವನ್ನು ಕಾಪಾಡಬೇಕು ಎಂದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮಾನ್ ನಾರಾಯಣಗೌಡ ಕೊಳಂಬೆ ಇವರು ವಿದ್ಯಾರ್ಥಿಗಳಿಗೆ ಗಿಡವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್, ಸಹ ಕಾರ್ಯಕ್ರಮಾಧಿಕಾರಿ ಶ್ರೀ ಸಂದೀಪ್ ಐ ಉಪಸ್ಥಿತರಿದ್ದರು. ಸ್ವಯಂಸೇವಕ ಧನುಷ್ ಕೆ ಎನ್ ಕಾರ್ಯಕ್ರಮದ ನಿರೂಪಣೆ ಮಾಡಿ, ಸ್ವಾಗತಿಸಿದರು. ಲತೇಶ್ ಧನ್ಯವಾದವಿತ್ತರು.

Related posts

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!