July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

ಉಜಿರೆ : “ಕೆಲಸದ ಒತ್ತಡವನ್ನು ಮಗುವಿನ ಮೇಲೆ ಹೇರಬೇಡಿ, ಮಕ್ಕಳಿಂದ ನಿರೀಕ್ಷೆಗಳಿರಲಿ ಆದರೆ ಅತಿಯಾದ ನಿರೀಕ್ಷೆ ಬೇಡ” ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪಿ.ಜಿ ಸ್ಟಡೀಸ್ ಆಂಡ್ ರಿಸರ್ಚ್ ಇನ್ ಸೋಶಿಯಲ್ ವರ್ಕ್ ವಿಭಾಗದ ಉಪನ್ಯಾಸಕಿ ಡಾ.ಧಾನೇಶ್ವರಿ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6,7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಮಂಗಳೂರಿನ ಅಕೊಲೆಟ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ವಿದ್ಯಾರ್ಥಿಗಳ ಭಾಷ ಅಭಿವೃದ್ಧಿಯ ಕುರಿತು ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!