March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya
error: Content is protected !!