23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!