July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!