25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya
error: Content is protected !!