23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

ನಾರಾವಿ: “ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತುಂಬಾ ಮುಖ್ಯವಾದ ಹಂತ. ಶಿಕ್ಷಣದೊಂದಿಗೆ ಜೀವನ ಶಿಕ್ಷಣ ಹಾಗೂ ಜೀವನ ಮೌಲ್ಯಗಳನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತಿದೆ. ನೈತಿಕತೆ ಮತ್ತು ಸಂಸ್ಕಾರ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ನೀಡುತ್ತದೆ”. ಎಂದು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೋ ಹೇಳಿದರು.

ಅವರು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು.


ಕನ್ನಡ ಉಪನ್ಯಾಸಕರಾದ ದಿನೇಶ್ ಬಿ ಕೆ ಬಳಂಜ ಮಾತನಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಗಣಿತಶಾಸ್ತ್ರದ ಉಪನ್ಯಾಸಕರಾದ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಉಪಪ್ರಾಂಶುಪಾಲರಾದ ರಿಚರ್ಡ್ ಮೋರಸ್ ಧನ್ಯವಾದವಿತ್ತರು. ಹಾಗೇ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಅಶ್ವಿತಾ ಸೆರಾವೋ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya
error: Content is protected !!