July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

ನಾರಾವಿ: “ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತುಂಬಾ ಮುಖ್ಯವಾದ ಹಂತ. ಶಿಕ್ಷಣದೊಂದಿಗೆ ಜೀವನ ಶಿಕ್ಷಣ ಹಾಗೂ ಜೀವನ ಮೌಲ್ಯಗಳನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತಿದೆ. ನೈತಿಕತೆ ಮತ್ತು ಸಂಸ್ಕಾರ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ನೀಡುತ್ತದೆ”. ಎಂದು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೋ ಹೇಳಿದರು.

ಅವರು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು.


ಕನ್ನಡ ಉಪನ್ಯಾಸಕರಾದ ದಿನೇಶ್ ಬಿ ಕೆ ಬಳಂಜ ಮಾತನಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಗಣಿತಶಾಸ್ತ್ರದ ಉಪನ್ಯಾಸಕರಾದ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಉಪಪ್ರಾಂಶುಪಾಲರಾದ ರಿಚರ್ಡ್ ಮೋರಸ್ ಧನ್ಯವಾದವಿತ್ತರು. ಹಾಗೇ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಅಶ್ವಿತಾ ಸೆರಾವೋ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!