23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya
error: Content is protected !!