23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya
error: Content is protected !!