September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಹಾಗೂ ಗ್ಯಾಸ್‌ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಸಂಚಾಲಕರಾದ ಮೋಹನ್ ಕುಮಾ‌ರ್, ಪತ್ರಕರ್ತರಾದ ಪ್ರಸಾದ್‌ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.


ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ. 5ರ ರಾತ್ರಿ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.


ಶಾಲೆಯಲ್ಲಿ ಕಳ್ಳತನವಾದ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ವರದಿಯನ್ನು ವೀಕ್ಷಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡ‌ರ್ ಮತ್ತು ಮಿಕ್ಸಿಯನ್ನು ನೀಡಿ ಮಾನವಿಯತೆಯನ್ನು ಮೆರೆದಿದ್ದಾರೆ.

Related posts

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!