33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya
error: Content is protected !!