30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya
error: Content is protected !!