23.8 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!