26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!