July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

ಉಜಿರೆ: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ನಾಯಕರ ಮೇಲೆ ಯಾವ ರೀತಿ ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ ಎಂಬುದಕ್ಕೆ ಮೇಲಿಂದ ಮೇಲೆ ಉದಾಹರಣೆಗಳು ಸಿಗುತ್ತಿದೆ. ಇತ್ತೀಚೆಗಷ್ಟೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರ ಮೇಲೆ ದ್ವೇಷದಿಂದ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಮೇಲೆ ದ್ವೇಷ ಕಾರುತ್ತಿರುವುದು ಸ್ಪಷ್ಟವಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮರ್ ಹತ್ಯೆಯನ್ನು ಖಂಡಿಸಿ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅನ್ಯಾಯದ ವಿರುದ್ಧ ಘೋಷಣೆ ಕೂಗಿದ್ದ ಪ್ರತಿಭಟನೆಕಾರರು ನ್ಯಾಯಕ್ಕಾಗಿ ಆಗ್ರಹಿಸಿದ್ದರು.ಆದರೆ ವಿದ್ಯಾರ್ಥಿಗಳು ಒಂದು ಕಡೆ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದರೆ, ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ. ಏಪ್ರಿಲ್ 22ರಂದು ನಡೆದ ಈ ಪ್ರತಿಭಟನೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುಂಪು ಸೇರಲಾಗಿದೆ. ಜೊತೆಗೆ ಅನುಮತಿಯನ್ನು ಪಡೆದಿಲ್ಲ ಎಂದು ವಿದ್ಯಾರ್ಥಿ ನಾಯಕರಾದ ಸುವಿತ್ ಶೆಟ್ಟಿ, ಸುಮಂತ್ ನೆರಿಯ, ಸನಲ್ ಶೆಟ್ಟಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಇದ್ದರೂ ಕೂಡ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಸಾಕಷ್ಟು ಸಂದರ್ಭದಲ್ಲಿ ಚುನಾವಣಾ ನೀತಿ ಸಮಿತಿ ಉಲ್ಲಂಘನೆಯಾಗಿದ್ದರೂ, ಯಾವುದೇ ಕ್ರಮಗಳನ್ನು ವಹಿಸಿರಲಿಲ್ಲ.ಆದರೆ ಬಿಜೆಪಿ ಹಾಗೂ ಕಾರ್ಯಕರ್ತರ ವಿರುದ್ಧ ಸದಾ ದ್ವೇಷ ಕಾರುವ ಕಾಂಗ್ರೆಸ್ ನಡವಳಿಕೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Related posts

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!