April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!