22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!