September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಹಾಗೂ ಗ್ಯಾಸ್‌ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಸಂಚಾಲಕರಾದ ಮೋಹನ್ ಕುಮಾ‌ರ್, ಪತ್ರಕರ್ತರಾದ ಪ್ರಸಾದ್‌ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.


ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ. 5ರ ರಾತ್ರಿ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.


ಶಾಲೆಯಲ್ಲಿ ಕಳ್ಳತನವಾದ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ವರದಿಯನ್ನು ವೀಕ್ಷಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡ‌ರ್ ಮತ್ತು ಮಿಕ್ಸಿಯನ್ನು ನೀಡಿ ಮಾನವಿಯತೆಯನ್ನು ಮೆರೆದಿದ್ದಾರೆ.

Related posts

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!