25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಹಾಗೂ ಗ್ಯಾಸ್‌ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಸಂಚಾಲಕರಾದ ಮೋಹನ್ ಕುಮಾ‌ರ್, ಪತ್ರಕರ್ತರಾದ ಪ್ರಸಾದ್‌ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.


ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ. 5ರ ರಾತ್ರಿ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.


ಶಾಲೆಯಲ್ಲಿ ಕಳ್ಳತನವಾದ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ವರದಿಯನ್ನು ವೀಕ್ಷಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡ‌ರ್ ಮತ್ತು ಮಿಕ್ಸಿಯನ್ನು ನೀಡಿ ಮಾನವಿಯತೆಯನ್ನು ಮೆರೆದಿದ್ದಾರೆ.

Related posts

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!