22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಹಾಗೂ ಗ್ಯಾಸ್‌ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಸಂಚಾಲಕರಾದ ಮೋಹನ್ ಕುಮಾ‌ರ್, ಪತ್ರಕರ್ತರಾದ ಪ್ರಸಾದ್‌ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.


ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ. 5ರ ರಾತ್ರಿ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.


ಶಾಲೆಯಲ್ಲಿ ಕಳ್ಳತನವಾದ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ವರದಿಯನ್ನು ವೀಕ್ಷಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡ‌ರ್ ಮತ್ತು ಮಿಕ್ಸಿಯನ್ನು ನೀಡಿ ಮಾನವಿಯತೆಯನ್ನು ಮೆರೆದಿದ್ದಾರೆ.

Related posts

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!