25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 8 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ನಡೆಯಿತು.


ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾ ಸಂಚಾಲಕರು ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2024-25 ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಬಹುದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ನೈನಾಡು ಚರ್ಚಿನ ಧರ್ಮಗುರುಗಳಾದ ವಂ|ಸ್ವಾ| ಅನಿಲ್ ಅವಿಲ್ಡ್ ಲೋಬೊ ಇವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳು ತಮ್ಮ ಜೀವನದಲ್ಲಿ ಕೆಲವು ಸೂತ್ರಗಳನ್ನು ಅನುಸರಿಸಬೇಕು, ಇದರಿಂದ ನಿಮ್ಮ ಜೀವನವು ಪರಿಪೂರ್ಣವಾಗುತ್ತದೆ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸತತ ಹನ್ನೆರಡು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ತಮ್ಮೆಲ್ಲರನ್ನು ಆಕಸ್ಮಿಕವಾಗಿ ಅಗಲಿದ ಶಿಕ್ಷಕಿ ಸುಜಾತ ರವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.


2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕವನ್ನು ಗಳಿಸಿದ ಅಲ್ವಿಟಾ ಡಿಸೋಜ, ನಂದನ್ ಪಿ ನಾಯಕ್ , ಗೌತಮಿ, ಜೊಸ್ಲಿನ್ ರಶ್ಮಿ ಡಿಸೋಜ, ಸ್ಪಂದನ ನಾಯಕ್, ರಿಶಾ ಕೊರೆಯ ಹಾಗೂ ಪ್ರಿಯಾ ಶಾಂತಿ ಫೆರ್ನಾಂಡಿಸ್ ಇವರನ್ನು ಅವರ ಹೆತ್ತವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.


ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕ- ಶಿಕ್ಷಕಿಯರನ್ನು ಮತ್ತು ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೊ ಡೇಸ ಇವರು ವಿದ್ಯಾರ್ಥಿಗಳಿಗೆ ಶಾಲಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಸ್ ರವರು,ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ ರವರು,ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿಯರಾದ ಶ್ರೀಮತಿ ವಿನ್ನಿ ಲೋಬೊ ರವರು ನಿರೂಪಿಸಿ, ಶ್ರೀಮತಿ ಜ್ಯೋತಿ ಫೆರ್ನಾಂಡಿಸ್ ರವರು ಸ್ವಾಗತಿಸಿ, ಶ್ರೀಮತಿ ಪ್ರಿನ್ಸಿಯಾ ಮಸ್ಕರೇನಸ್ ರವರು ಧನ್ಯವಾದಗಳನ್ನು ಸಮರ್ಪಿಸಿದರು .

Related posts

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya
error: Content is protected !!