September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

ಉಜಿರೆ : “ಕೆಲಸದ ಒತ್ತಡವನ್ನು ಮಗುವಿನ ಮೇಲೆ ಹೇರಬೇಡಿ, ಮಕ್ಕಳಿಂದ ನಿರೀಕ್ಷೆಗಳಿರಲಿ ಆದರೆ ಅತಿಯಾದ ನಿರೀಕ್ಷೆ ಬೇಡ” ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪಿ.ಜಿ ಸ್ಟಡೀಸ್ ಆಂಡ್ ರಿಸರ್ಚ್ ಇನ್ ಸೋಶಿಯಲ್ ವರ್ಕ್ ವಿಭಾಗದ ಉಪನ್ಯಾಸಕಿ ಡಾ.ಧಾನೇಶ್ವರಿ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6,7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಮಂಗಳೂರಿನ ಅಕೊಲೆಟ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ವಿದ್ಯಾರ್ಥಿಗಳ ಭಾಷ ಅಭಿವೃದ್ಧಿಯ ಕುರಿತು ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!