23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!