22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!