23.3 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya
error: Content is protected !!