July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!