ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ.

ಕುಂದಾಪುರ ಖಾರ್ವಿಕೇರಿಯ ಮಧ್ಯಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲೀಕತ್ವದ ಈ ಹಾಯಿದೋಣಿ ಈಗ ಲಂಗರು ಹಾಕಿದ ಸ್ಥಿತಿಯಲ್ಲಿದೆ. ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಪ್ರಸ್ತಾವಿಸಿದ್ದು, ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ದೋಣಿಯನ್ನು ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ನೀಡಲಾಗುವುದು ಎಂದು ಕುಂದಾಪುರ ಕೊಂಕಣ ಖಾರ್ವಿ ಸಮಾಜದ ಅಧ್ಯಕ್ಷ ಜಯಾನಂದ ಖಾರ್ವಿ ತಿಳಿಸಿದ್ದಾರೆ.


14 ವರ್ಷಗಳ ಹಿಂದೆ ಚಿಪ್ಪು ಸಾಗಾಟದ ಉದ್ದೇಶಕ್ಕೆ ದೋಣಿಯ ನಿರ್ಮಾಣದ ಹುಡುಕಾಟದಲ್ಲಿದ್ದಾಗ ಕಂಡೂರು ಸಮೀಪ ದೊರೆತ ಸುಮಾರು 20 ಅಡಿ ಸುತ್ತಳತೆಯ ಬೃಹತ್ ಮರದಿಂದ ದೋಣಿ ನಿರ್ಮಿಸಲಾಗಿದೆ. 51 ಅಡಿ ಉದ್ದ, 10 ಅಡಿ ಅಗಲದ ಈ ದೋಣಿಯಲ್ಲಿ ಒಂದು ಮುಕ್ಕಾಲು ಲೋಡ್ ಚಿಪ್ಪು ಸಾಗಾಟ ಮಾಡಲಾಗುತ್ತಿತ್ತು. ಅಂದಿನ ದಿನಗಳಲ್ಲಿಯೇ ದೋಣಿ ನಿರ್ಮಿಸಲು 2.5 ಲಕ್ಷ ರೂ.ವೆಚ್ಚವಾಗಿತ್ತು.

ಜೂ 9ರಂದು ಮೆರವಣಿಗೆಯ ಮೂಲಕ ದೋಣಿಯನ್ನು ಕುಂದಾಪುರ ಶಾಸ್ತ್ರಿ ಸರ್ಕಲ್ ತನಕ ತರಲಾಗುವುದು. ಅಲ್ಲಿಂದ ದೊಡ್ಡ ಲಾರಿಯಲ್ಲಿ ದೋಣಿಯನ್ನು ಧರ್ಮಸ್ಥಳಕ್ಕೆ ತರಲಾಗುವುದು.

Related posts

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!