22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

ನಾರಾವಿ: “ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತುಂಬಾ ಮುಖ್ಯವಾದ ಹಂತ. ಶಿಕ್ಷಣದೊಂದಿಗೆ ಜೀವನ ಶಿಕ್ಷಣ ಹಾಗೂ ಜೀವನ ಮೌಲ್ಯಗಳನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತಿದೆ. ನೈತಿಕತೆ ಮತ್ತು ಸಂಸ್ಕಾರ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ನೀಡುತ್ತದೆ”. ಎಂದು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೋ ಹೇಳಿದರು.

ಅವರು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು.


ಕನ್ನಡ ಉಪನ್ಯಾಸಕರಾದ ದಿನೇಶ್ ಬಿ ಕೆ ಬಳಂಜ ಮಾತನಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಗಣಿತಶಾಸ್ತ್ರದ ಉಪನ್ಯಾಸಕರಾದ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಉಪಪ್ರಾಂಶುಪಾಲರಾದ ರಿಚರ್ಡ್ ಮೋರಸ್ ಧನ್ಯವಾದವಿತ್ತರು. ಹಾಗೇ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಅಶ್ವಿತಾ ಸೆರಾವೋ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!