25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

ಉಜಿರೆ: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ನಾಯಕರ ಮೇಲೆ ಯಾವ ರೀತಿ ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ ಎಂಬುದಕ್ಕೆ ಮೇಲಿಂದ ಮೇಲೆ ಉದಾಹರಣೆಗಳು ಸಿಗುತ್ತಿದೆ. ಇತ್ತೀಚೆಗಷ್ಟೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರ ಮೇಲೆ ದ್ವೇಷದಿಂದ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಮೇಲೆ ದ್ವೇಷ ಕಾರುತ್ತಿರುವುದು ಸ್ಪಷ್ಟವಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮರ್ ಹತ್ಯೆಯನ್ನು ಖಂಡಿಸಿ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅನ್ಯಾಯದ ವಿರುದ್ಧ ಘೋಷಣೆ ಕೂಗಿದ್ದ ಪ್ರತಿಭಟನೆಕಾರರು ನ್ಯಾಯಕ್ಕಾಗಿ ಆಗ್ರಹಿಸಿದ್ದರು.ಆದರೆ ವಿದ್ಯಾರ್ಥಿಗಳು ಒಂದು ಕಡೆ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದರೆ, ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ. ಏಪ್ರಿಲ್ 22ರಂದು ನಡೆದ ಈ ಪ್ರತಿಭಟನೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುಂಪು ಸೇರಲಾಗಿದೆ. ಜೊತೆಗೆ ಅನುಮತಿಯನ್ನು ಪಡೆದಿಲ್ಲ ಎಂದು ವಿದ್ಯಾರ್ಥಿ ನಾಯಕರಾದ ಸುವಿತ್ ಶೆಟ್ಟಿ, ಸುಮಂತ್ ನೆರಿಯ, ಸನಲ್ ಶೆಟ್ಟಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಇದ್ದರೂ ಕೂಡ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಸಾಕಷ್ಟು ಸಂದರ್ಭದಲ್ಲಿ ಚುನಾವಣಾ ನೀತಿ ಸಮಿತಿ ಉಲ್ಲಂಘನೆಯಾಗಿದ್ದರೂ, ಯಾವುದೇ ಕ್ರಮಗಳನ್ನು ವಹಿಸಿರಲಿಲ್ಲ.ಆದರೆ ಬಿಜೆಪಿ ಹಾಗೂ ಕಾರ್ಯಕರ್ತರ ವಿರುದ್ಧ ಸದಾ ದ್ವೇಷ ಕಾರುವ ಕಾಂಗ್ರೆಸ್ ನಡವಳಿಕೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Related posts

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya
error: Content is protected !!