September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya
error: Content is protected !!