September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

ಬೆಳ್ತಂಗಡಿ : ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಜೂ 7 ರಂದು ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಹಾಗೂ ಗ್ಯಾಸ್‌ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.


ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ (ರಿ) ಸಂಚಾಲಕರಾದ ಮೋಹನ್ ಕುಮಾ‌ರ್, ಪತ್ರಕರ್ತರಾದ ಪ್ರಸಾದ್‌ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.


ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ. 5ರ ರಾತ್ರಿ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.


ಶಾಲೆಯಲ್ಲಿ ಕಳ್ಳತನವಾದ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ವರದಿಯನ್ನು ವೀಕ್ಷಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾ‌ರ್ ಅವರು ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡ‌ರ್ ಮತ್ತು ಮಿಕ್ಸಿಯನ್ನು ನೀಡಿ ಮಾನವಿಯತೆಯನ್ನು ಮೆರೆದಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya
error: Content is protected !!