September 6, 2026
ಜಿಲ್ಲಾ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ

ಬಂಟ್ವಾಳ : ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ಇಂದು ನಡೆಯಬೇಕಾಗಿದೆ .ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ ಆಚರಣೆಗಳು ಮಾನಸಿಕವಾಗಿ ಸತ್ಪರಿಣಾಮ ಬೀರುವಂತೆ ಅನುಷ್ಠಾನವಾಗಬೇಕು .ಆರಾಧನಾ ಕೇಂದ್ರಗಳು ಮನಸ್ಸಿಗೆ ಸಾತ್ವಿಕ ಪ್ರಭಾವ ಬೀರುವ ವಾತಾವರಣವನ್ನು ಹೊಂದಿರಬೇಕೆಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ತಿಳಿಸಿದರು.

ಮಾಣಿಲ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ 15ನೇ ಪ್ರತಿಷ್ಠ ವರ್ಧಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಬಿ.ಭುಜಬಲಿ ಪ್ರತಿಷ್ಠಾನದ ವತಿಯಿಂದ ಸಹಕಾರಿ ಸಂಸ್ಥೆ ಸ್ಥಾಪಿಸುವುದು ಉತ್ತಮ ಯೋಜನೆ ಎಂದು ತಿಳಿಸಿದರು.

ಹಿರಿಯರು ಮಾಡುವ ಸೇವಾ ಕಾರ್ಯವು ಮಹತ್ವದಾಗಿದ್ದು ಇದರಿಂದ ಸಮಾಜವು ಪ್ರೇರಣೆ ಪಡೆಯುವಂತಾಗಬೇಕೆಂದು ಪ್ರತಿಷ್ಠಾನದ ಉಪಾಧ್ಯಕ್ಷ ಯಂ. ಜಯರಾಮ ಭಂಡಾರಿ ಧರ್ಮಸ್ಥಳ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಮಾತನಾಡಿ ಡಿಸೆಂಬರನಲ್ಲಿ ಜರಗುವ ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿಸಲು ಸ್ವಯಂ ಕರ್ತವ್ಯವೆಂದು ತಿಳಿದು ಸದಸ್ಯರು ಬದ್ಧತೆಯಿಂದ ಸಹಕರಿಸಬೇಕೆಂದರು.

ಪ್ರತಿಷ್ಠಾನದ ಸದಸ್ಯರಾದ ಅನಾರು ಕೃಷ್ಣಶರ್ಮ ಮತ್ತು ಬಾಲಕೃಷ್ಣ ನಾಯಕ ಕೋಕಳ ಸ್ವಾಮೀಜಿಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿದರು.

ಬೆಳ್ತಂಗಡಿ ಘಟಕದ ಸಂಚಾಲಕ ವಸಂತ ಸುವರ್ಣ , ವಾರಿಜಾ ಸುವರ್ಣ ,ಪುತ್ತೂರು ಘಟಕದ ಚಂದ್ರಶೇಖರ ಆಳ್ವ ಪಡುಮಲೆ,ಭವಾನಿ ಶಂಕರ ಶೆಟ್ಟಿ ಪುತ್ತೂರು, ಸೋಮನಾಥ ಬೇಕಲ್, ಚಂದ್ರಕಲಾ ಎಸ್ ಬೇಕಲ್, ಉದಯಶಂಕರ್ ರೈ ಪುಣಚ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ, ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರತಿಷ್ಠಾನದ ಟ್ರಸ್ಟಿ ದುಗ್ಗಪ್ಪ. ಯನ್ ಕಾರ್ಯಕ್ರಮ ನಿರೂಪಿಸಿದರು.

Related posts

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya
error: Content is protected !!