September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

ಉಜಿರೆ :ಜ್ಞಾನಶ್ರೀ
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿಕರಾವಳಿ ಜಾನಪದ ಕಲಾ ತಂಡದಿಂದ
ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ರವರು ದೀಪ ಬೆಳಗಿಸಿ ಟಮ್ಕಿ ಬಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು . ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ .ನೀರು ಅತ್ಯ ಅಮೂಲ್ಯ , ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ ,ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ -ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ, ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದ್ದರು.ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು ಶೇಲಾ ವಲಯದ ಮೇಲ್ಪೀಚಾರಕರಾದ ವನಿತಾ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರ ಸೇವಾ ಪ್ರತಿನಿಧಿ ಪ್ರೇಮ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು.ಊರಿನ ಸದಸ್ಯರು ಪ್ರಗತಿ ಬಂದು ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!